Skip to main content

ಪ್ರಜ್ಞೆ ತಪ್ಪಿಹೋದ ಇಮಾಮ್ ಅಬೂ ಹನೀಫಃ (ರ)

ಪ್ರಜ್ಞೆ ತಪ್ಪಿಹೋದ ಇಮಾಮ್ ಅಬೂ ಹನೀಫಃ (ರ)

*✒ಯೂಸುಫ್ ನಬ್‌ಹಾನಿ ಕುಕ್ಕಾಜೆ*

  ▪ಒಮ್ಮೆ ಹನಫೀ ಮದ್‌ಹಬಿನ ನೇತಾರ, ಲಕ್ಷೋಪಲಕ್ಷ ಪ್ರವಾದಿ ಹದೀಸುಗಳನ್ನು ಕಂಠಪಾಠ ಮಾಡಿದ್ದ, ಪ್ರವಾದಿ ಮುಹಮ್ಮದ್ (ಸ) ರನ್ನು ಎಷ್ಟೋ ಸಲ ಕನಸಿನಲ್ಲೂ ಎಚ್ಚರದಲ್ಲೂ ಕಂಡಿದ್ದ, ಇಮಾನಿನ ಪ್ರಭೆ ಜ್ಞಾನಸೂರ್ಯ ಇಮಾಮ್ *ಅಬೂಹನೀಫ* (ರ) ರು ಇರಾಕಿನ ಒಂದು ಒಳ ದಾರಿಯಲ್ಲಿ ನಡೆದು ಹೋಗುತ್ತಿದ್ದರು. ವಿಶಾಲವಲ್ಲದ ದಾರಿಯಾದ್ದರಿಂದ ಎದುರಿನಿಂದ  ಮದ್‌ರಸ ಬಿಟ್ಟು ಬರುತ್ತಿದ್ದ ಒಬ್ಬ ಪುಟ್ಟ ಬಾಲಕನ ಕಾಲಿಗೆ ಅವರರಿಯದೆಯೇ ತುಳಿದುಹೋಯಿತು.
   ▪ಇಮಾಮರ ತುಳಿತದಿಂದ ಕಾಲಿಗೆ ನೋವಾದ ಬಾಲಕ ಇಮಾಮರ ಮುಖಕ್ಕೆ ನೋಡಿ ಹೇಳಿದ. *"ಇಮಾಮರೇ..., ನಾಳೆ ಆಖಿರವಿದೆಯೆಂದೂ (ಪರಲೋಕ) ಅಲ್ಲಿ ವಿಚಾರಣೆಯಿದೆ ಎಂಬ ನೆನಪಿರಲಿ. ಅಲ್ಲಾಹನ ಶಿಕ್ಷೆಯ ಬಗ್ಗೆ ನಿಮಗೆ ಗೊತ್ತಿದೆಯಲ್ಲವೇ...?*
   ▪ಸುಬ್‌ಹಾನಲ್ಲಾಹ್!!! ಇದು ಕೇಳಿದಾಕ್ಷಣ ಹುಡುಗನ ಮಾತಿನ ಗೌರವ ಈಮಾನಿನ ತೇಜಸ್ಸು ಇಮಾಮ್ ಅಬೂ ಹನೀಫರ ಹೃದಯಕ್ಕೆ ಸಿಡಿಲು ಬಡಿದಂತಾಗಿ ಅಲ್ಲೇ ಪ್ರಜ್ಞೆತಪ್ಪಿ ಬಿದ್ದರು.

ಸಂಗ್ರಹ : ಇಮಾಮ್ ಸ್ವಫೂರಿಯವರ *ನುಝ್‌ಹತುಲ್ ಮಜಾಲಿಸ್* ಎಂಬ ಗ್ರಂಥ.

Comments

Popular posts from this blog

ಗ್ರಹಣ ನಮಾಜಿನ ರೂಪ

ಗ್ರಹಣ ನಮಾಜಿನ ರೂಪ *ಚಂದ್ರಗ್ರಹಣದ ಸುನ್ನತ್ ನಮಾಜು ಎರಡು ರಕಅತ್ ಅಲ್ಲಾಹನಿಗಾಗಿ ಜಮಾಅತ್ತಾಗಿ ನಾನು ನಿರ್ವಹಿಸುವೆನು* ಎಂದು ನಿಯ್ಯತ್ ಮಾಡಿ ಅಲ್ಲಾಹು ಅಕ್ಬರ್ ಎಂದು ಹೇಳಿ ನಮಾಜಿಗೆ ಪ್ರವೇಶಿಸುವು...

ಮುತ್ತು ನೆಬಿ ಸ್ವಲ್ಲಲ್ಲಾಹು ಅಲೈಹಿ ವಸಲ್ಲಂ. ಲೇ - ನವಾಝ್ ಸಖಾಫಿ ಅಲ್ ಅಮ್ಜದಿ ಉಳ್ಳಾಲ ಅಕ್ಕರೆಕೆರೆ.

ಮುತ್ತು ನೆಬಿ ಸ್ವಲ್ಲಲ್ಲಾಹು ಅಲೈಹಿ ವಸಲ್ಲಂ. ಲೇ - ನವಾಝ್ ಸಖಾಫಿ ಅಲ್ ಅಮ್ಜದಿ ಉಳ್ಳಾಲ ಅಕ್ಕರೆಕೆರೆ. ಆಮಿನ ಬೀವಿ ರ.ಅ ಗರ್ಭಿಣಿಯಾಗಿರುವಾಗ ವ್ಯಾಪಾರಕ್ಕಾಗಿ ಸಿರಿಯಾಕ್ಕೆ ಹೋಗಿದ್ದ ಅಬ್ದುಲ್ಲಾಹ್ (ರ.ಅ) ಮರಳಿ ಬರುವಾಗ ಮದೀನದಲ್ಲಿ ವಫಾತಾದರು.ತಂದೆಯ ಮಾವಂದಿರರಾದ ಬನುನ್ನಜ್ಜಾರ್ ಗೋತ್ರದವರ ಬಳಿ ದಫನ ಮಾಡಲಾಯಿತು.ರಬೀವುಲ್ ಹನ್ನೆರಡು ಸೋಮವಾರ ಸುಬಹಿಯ ಸ್ವಲ್ಪ ಮುಂಚೆ ಅಂತ್ಯ ಪ್ರವಾದಿ ಮುಹಮ್ಮದ್ ಮುಸ್ತಫ ಸ.ಅ ಮಕ್ಕಾದಲ್ಲಿ ಜನಿಸಿದರು.ಅಂದು ಕ್ರಿಸ್ತಶಕ 571 ಎಪ್ರಿಲ್ 21 ಆಗಿತ್ತು.ನೆಬಿ ಸ.ಅ ಜನಿಸಿದ ದಿನ ಅತ್ಯಂತ ಸಂತೋಷದಾಯಕವಾದ ದಿನವಾಗಿದೆ.ಮಾನವ ಶ್ರೇಷ್ಠರಾದ ಪ್ರವಾದಿ ಮುಹಮ್ಮದ್ ಸ.ಅ ರವರ ಮುಖಾಂತರ ಮಾನವ ಸಮೂಹವನ್ನು ಅಲ್ಲಾಹು ಅನುಗ್ರಹಿಸಿದ ಸುದಿನವಾಗಿದೆ ಅಂದು.ಮುಸಲ್ಮಾನರು ಈ ಅನುಗ್ರಹಕ್ಕೆ ಕ್ರತಜ್ಞತೆ ಸಲ್ಲಿಸಿ ಅಂದು ಮೀಲಾದುನ್ನಬಿ ಆಚರಣೆ ಮಾಡುತ್ತಾರೆ.ನೆಬಿ ಸ.ಅ ರವರ ಮದಹ್ ಕೀರ್ತನೆಗಳನ್ನು ಹೇಳಿ, ಹಾಡಿಹೊಗಳಿ ದಾನಧರ್ಮಗಳನ್ನು ನೀಡಿ ಸಂತೋಷ ಪ್ರಕಟಿಸುತ್ತಾರೆ.              ಭೂಮಿಯ ಮೇಲೆ ಜನ್ಮವೆತ್ತಿ ಬಂದ ಅತ್ಯಂತ ಉತ್ತಮನಾದ ಮನುಷ್ಯ ನೆಬಿ ಸ.ಅ ಆಗಿದ್ದಾರೆ.ಮುಂಜಿಕರ್ಮ ನಿರ್ವಹಿಸಲ್ಪಟ್ಟ,ಹೊಕ್ಕುಳ ಬಳ್ಳಿ ಕತ್ತರಿಸಲ್ಪಟ್ಟ,ಕಣ್ಣಿಗೆ ಸುರುಮ ಹಾಕಲ್ಪಟ್ಟ ಸ್ಥಿತಿಯಲ್ಲಿ ಸಂಪೂರ್ಣ ಸಂಶುದ್ಧವಾದ ರೀತಿಯಲ್ಲಾಗಿದೆ ಅವರು ಜನಿಸಿದ್ದು.ಅಬೂತಾಲಿಬರ ಮನೆಯಲ್ಲಾಗಿದೆ ಜನನ.ಹೆರಿಗೆ...

ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಕರ ಪಾತ್ರ

ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಕರ ಪಾತ್ರ _✍🏻ಜಹಫರ್ ಸಾಧಿಕ್ ಕಟ್ಟದಪಡ್ಪು_ _ನಮ್ಮ ಸಮಾಜವು ನಮಗೆ ಜನ್ಮ ಕೊಟ್ಟ ತಂದೆ ತಾಯಿಯ ನಂತರ ಮಹತ್ತರವಾದ ಸ್ಥಾನವನ್ನು ಶಿಕ್ಷಕರಿಗೆ ನೀಡಿ ಗೌರವಿಸಿದೆ.  ಶಿಲ್ಪಿ...