ಸಯ್ಯಿದ್ ಮದನಿ ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ ಉಳ್ಳಾಲ ರೇಂಜ್ ಇದರ ವಾರ್ಷಿಕ ಮಹಾಸಭೆ ಹಾಗು 2019 -20 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ
ಸಯ್ಯಿದ್ ಮದನಿ ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ ಉಳ್ಳಾಲ ರೇಂಜ್ ಇದರ ವಾರ್ಷಿಕ ಮಹಾಸಭೆ ಹಾಗು 2019 -20 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಅಳೇಕಲದ ನಜಾತುಸ್ಸಿಬಿಯಾನ್ ಮದ್ರಸ ಹಾಲಿನಲ್ಲಿ ನಡೆಯಿತು.
ಉಳ್ಳಾಲ ರೇಂಜ್ ಅಧ್ಯಕ್ಷರಾದ ಯೂನುಸ್ ಇಮ್ದಾದಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಅಳೇಕಲ ಜುಮಾ ಮಸೀದಿ ಖತೀಬರಾದ ಅಬೂಝಿಯಾದ್ ಮದನಿ ಪಟ್ಟಾಂಬಿ ಉಸ್ತಾದ್ ದುವಾ ನೆರವೇರಿಸಿದರು. ಸುಂದರಿಬಾಗ್ ಜುಮಾ ಮಸೀದಿ ಖತೀಬರಾದ ಶರೀಫ್ ಸಅದಿ ಕಾರ್ಯಕ್ರಮವನ್ನು ಉಧ್ಘಾಟಿಸಿದರು. ಸಯ್ಯಿದ್ ಮದನಿ ಮೊಹಲ್ಲಾ ಒಕ್ಕೂಟ ಇದರ ಗೌರವಾಧ್ಯಕ್ಷರಾದ ಯು ಎಸ್ ಹಂಝ ಹಾಜಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ಪವಿತ್ರ ಹಜ್ ಯಾತ್ರೆ ಹೊರಟ ಶರೀಫ್ ಸಅದಿ ಉಸ್ತಾದರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು.
ಬಳಿಕ ಸಯ್ಯಿದ್ ಮದನಿ ಸುನ್ನೀ ಜಂ ಇಯ್ಯತುಲ್ ಮುಅಲ್ಲಿಮೀನ್ ಉಳ್ಳಾಲ ರೇಂಜ್ 2019 - 20 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.
ನೂತನಾಧ್ಯಕ್ಷರಾಗಿ ಯೂನುಸ್ ಇಮ್ದಾದಿ ತೋಟ, ಪ್ರಧಾನ ಕಾರ್ಯದರ್ಶಿಯಾಗಿ ಅಯ್ಯೂಬ್ ಮಹ್ಲರಿ ಮದನಿ ನಗರ, ಕೋಶಾಧಿಕಾರಿಯಾಗಿ ಅಝೀಝ್ ಸಅದಿ ಅಗ್ರಹಾರ, ಪರೀಕ್ಷಾ ವಿಭಾಗದ ಚೇರಮಾನಾಗಿ ಉಸ್ಮಾನ್ ಸಖಾಫಿ ಕಣ್ಣೂರು, ಕನ್ವೀನರಾಗಿ ನವಾಝ್ ಸಖಾಫಿ ಅಲ್ ಅಮ್ಜದಿ ಉಳ್ಳಾಲ, ಕ್ಷೇಮನಿಧಿ ವಿಭಾಗದ ಚೇರಮಾನಾಗಿ ಜಲಾಲುದ್ದೀನ್ ಮದನಿ ಉಳ್ಳಾಲ, ಕನ್ವೀನರಾಗಿ ಯೂಸುಫ್ ಮುಸ್ಲಿಯಾರ್ ಸಜಿಪ, ಮ್ಯಾಗಜಿನ್ ವಿಭಾಗದ ಚೇಯರ್ಮಾನ್ ಆಗಿ ಅಬ್ಬಾಸ್ ಮದನಿ, ಕನ್ವೀನರಾಗಿ ಹಮೀದ್ ಮದನಿ ಕೈಕೋ, ಮಿಶನರಿ ವಿಭಾಗದ ಚೇರಮಾನಾಗಿ ಮುನೀರ್ ಲತೀಫಿ, ಕನ್ವೀನರಾಗಿ ಅಶ್ರಫ್ ಸಅದಿ, ಟ್ರೈನಿಂಗ್ ವಿಭಾಗದ ಚೇರಮಾನಾಗಿ ಇಸ್ಮಾಯಿಲ್ ಸಖಾಫಿ, ಕನ್ವೀನರಾಗಿ ಮುಹ್ಯಿದ್ದೀನ್ ಮದನಿ ಕಟ್ಟತ್ತಿಲ ಇವರುಗಳನ್ನು ಆಯ್ಕೆ ಮಾಡಲಾಯಿತು ಹಾಗು 8 ಮಂದಿಯನ್ನು ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಆಯ್ಕೆ ಮಾಡಲಾಯಿತು.
ರೇಂಜ್ ಪ್ರಧಾನ ಕಾರ್ಯದರ್ಶಿ ಅಯ್ಯೂಬ್ ಮಹ್ಲರಿ ಸ್ವಾಗತಿಸಿ, ರೇಂಜ್ ಕಾರ್ಯದರ್ಶಿ ನವಾಝ್ ಸಖಾಫಿ ಧನ್ಯವಾದವಿತ್ತರು.





















Comments