Skip to main content

ವುಳೂವಿನ ಬಳಿಕ ನಮಾಝ್

ವುಳೂವಿನ ಬಳಿಕ ನಮಾಝ್

ನಬಿ ಸ್ವಲ್ಲಲ್ಲಾಹು ಅಲೈಹಿ ವಸಲ್ಲಮರು ಒಮ್ಮೆ ಸುಬ್ ಹಿ ನಮಾಝಿನ ಸಂದರ್ಭ ಸ್ವಹಾಬಿವರ್ಯರಾದ ಬಿಲಾಲ್(ರ) ರವರನ್ನು ಕರೆದು ಕೇಳಿದರು. "ಓ ಬಿಲಾಲ್ ರವರೇ, ನೀವು ಮುಸ್ಲಿಮರಾದ ಬಳಿಕ ಮಾಡಿದ ಅತ್ಯಂತ ಪ್ರತಿಫಲದಾಯಕವಾದ ಸತ್ಕರ್ಮ ಯಾವುದೆಂದು ಹೇಳುವಿರಾ?. ಕಾರಣ, ಸ್ವರ್ಗದಲ್ಲಿ ನನ್ನ ಮುಂಭಾಗದಿಂದ ನಡೆಯುವಂತೆ ನಿಮ್ಮ ಹೆಜ್ಜೆಗಳ ಶಬ್ಧವನ್ನು ನಾನು ಕೇಳುತ್ತಿದ್ದೇನೆ!". ಆಗ ಬಿಲಾಲ್(ರ) ರವರು ಹೇಳುತ್ತಾರೆ; "ನಾನು ಅಂತಹ ಸತ್ಕರ್ಮವನ್ನೇನೂ ಮಾಡಿಲ್ಲ. ಆದರೆ ರಾತ್ರಿಯಾಗಲಿ, ಹಗಲಾಗಲಿ, ಯಾವುದೇ ಸಂದರ್ಭದಲ್ಲಾದರೂ ಸರಿ. ನಾನು ವುಳೂ (ಅಂಗಶುದ್ಧಿ) ಮಾಡುವುದಾದರೆ ಅದರ ನಂತರ ನನ್ನ ಮೇಲೆ ಸುನ್ನತ್ತಾಗಿರುವ ಎರಡು ರಕ್ ಅತ್ ನಮಾಝನ್ನು ಮಾಡದೇ ನಾನು ವುಳೂ ನಿರ್ವಹಿಸುತ್ತಿರಲಿಲ್ಲ".(ಮಿಶ್ಕಾತ್)

ವುಳೂವಿನ ಬಳಿಕವಿರುವ, ನಾವೆಲ್ಲರೂ ನಗಣ್ಯವಾಗಿ ತಳ್ಳುವ ಎರಡು ರಕ್ ಅತ್ ಸುನ್ನತ್ ನಮಾಝಿನ ಪುಣ್ಯವಿದು. ಇಂತಹ ಅದೆಷ್ಟು ಪ್ರತಿಫಲದಾಯಕವಾದ ಸತ್ಕರ್ಮಗಳನ್ನು ನಾವು ಕೈ ಬಿಡುತ್ತಿದ್ದೇವಲ್ಲವೇ?.

*ಜುನೈದ್ ಸಖಾಫಿ ಜೀರ್ಮುಕ್ಕಿ*

Comments

Popular posts from this blog

ಗ್ರಹಣ ನಮಾಜಿನ ರೂಪ

ಗ್ರಹಣ ನಮಾಜಿನ ರೂಪ *ಚಂದ್ರಗ್ರಹಣದ ಸುನ್ನತ್ ನಮಾಜು ಎರಡು ರಕಅತ್ ಅಲ್ಲಾಹನಿಗಾಗಿ ಜಮಾಅತ್ತಾಗಿ ನಾನು ನಿರ್ವಹಿಸುವೆನು* ಎಂದು ನಿಯ್ಯತ್ ಮಾಡಿ ಅಲ್ಲಾಹು ಅಕ್ಬರ್ ಎಂದು ಹೇಳಿ ನಮಾಜಿಗೆ ಪ್ರವೇಶಿಸುವು...

ಮುತ್ತು ನೆಬಿ ಸ್ವಲ್ಲಲ್ಲಾಹು ಅಲೈಹಿ ವಸಲ್ಲಂ. ಲೇ - ನವಾಝ್ ಸಖಾಫಿ ಅಲ್ ಅಮ್ಜದಿ ಉಳ್ಳಾಲ ಅಕ್ಕರೆಕೆರೆ.

ಮುತ್ತು ನೆಬಿ ಸ್ವಲ್ಲಲ್ಲಾಹು ಅಲೈಹಿ ವಸಲ್ಲಂ. ಲೇ - ನವಾಝ್ ಸಖಾಫಿ ಅಲ್ ಅಮ್ಜದಿ ಉಳ್ಳಾಲ ಅಕ್ಕರೆಕೆರೆ. ಆಮಿನ ಬೀವಿ ರ.ಅ ಗರ್ಭಿಣಿಯಾಗಿರುವಾಗ ವ್ಯಾಪಾರಕ್ಕಾಗಿ ಸಿರಿಯಾಕ್ಕೆ ಹೋಗಿದ್ದ ಅಬ್ದುಲ್ಲಾಹ್ (ರ.ಅ) ಮರಳಿ ಬರುವಾಗ ಮದೀನದಲ್ಲಿ ವಫಾತಾದರು.ತಂದೆಯ ಮಾವಂದಿರರಾದ ಬನುನ್ನಜ್ಜಾರ್ ಗೋತ್ರದವರ ಬಳಿ ದಫನ ಮಾಡಲಾಯಿತು.ರಬೀವುಲ್ ಹನ್ನೆರಡು ಸೋಮವಾರ ಸುಬಹಿಯ ಸ್ವಲ್ಪ ಮುಂಚೆ ಅಂತ್ಯ ಪ್ರವಾದಿ ಮುಹಮ್ಮದ್ ಮುಸ್ತಫ ಸ.ಅ ಮಕ್ಕಾದಲ್ಲಿ ಜನಿಸಿದರು.ಅಂದು ಕ್ರಿಸ್ತಶಕ 571 ಎಪ್ರಿಲ್ 21 ಆಗಿತ್ತು.ನೆಬಿ ಸ.ಅ ಜನಿಸಿದ ದಿನ ಅತ್ಯಂತ ಸಂತೋಷದಾಯಕವಾದ ದಿನವಾಗಿದೆ.ಮಾನವ ಶ್ರೇಷ್ಠರಾದ ಪ್ರವಾದಿ ಮುಹಮ್ಮದ್ ಸ.ಅ ರವರ ಮುಖಾಂತರ ಮಾನವ ಸಮೂಹವನ್ನು ಅಲ್ಲಾಹು ಅನುಗ್ರಹಿಸಿದ ಸುದಿನವಾಗಿದೆ ಅಂದು.ಮುಸಲ್ಮಾನರು ಈ ಅನುಗ್ರಹಕ್ಕೆ ಕ್ರತಜ್ಞತೆ ಸಲ್ಲಿಸಿ ಅಂದು ಮೀಲಾದುನ್ನಬಿ ಆಚರಣೆ ಮಾಡುತ್ತಾರೆ.ನೆಬಿ ಸ.ಅ ರವರ ಮದಹ್ ಕೀರ್ತನೆಗಳನ್ನು ಹೇಳಿ, ಹಾಡಿಹೊಗಳಿ ದಾನಧರ್ಮಗಳನ್ನು ನೀಡಿ ಸಂತೋಷ ಪ್ರಕಟಿಸುತ್ತಾರೆ.              ಭೂಮಿಯ ಮೇಲೆ ಜನ್ಮವೆತ್ತಿ ಬಂದ ಅತ್ಯಂತ ಉತ್ತಮನಾದ ಮನುಷ್ಯ ನೆಬಿ ಸ.ಅ ಆಗಿದ್ದಾರೆ.ಮುಂಜಿಕರ್ಮ ನಿರ್ವಹಿಸಲ್ಪಟ್ಟ,ಹೊಕ್ಕುಳ ಬಳ್ಳಿ ಕತ್ತರಿಸಲ್ಪಟ್ಟ,ಕಣ್ಣಿಗೆ ಸುರುಮ ಹಾಕಲ್ಪಟ್ಟ ಸ್ಥಿತಿಯಲ್ಲಿ ಸಂಪೂರ್ಣ ಸಂಶುದ್ಧವಾದ ರೀತಿಯಲ್ಲಾಗಿದೆ ಅವರು ಜನಿಸಿದ್ದು.ಅಬೂತಾಲಿಬರ ಮನೆಯಲ್ಲಾಗಿದೆ ಜನನ.ಹೆರಿಗೆ...

ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಕರ ಪಾತ್ರ

ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಕರ ಪಾತ್ರ _✍🏻ಜಹಫರ್ ಸಾಧಿಕ್ ಕಟ್ಟದಪಡ್ಪು_ _ನಮ್ಮ ಸಮಾಜವು ನಮಗೆ ಜನ್ಮ ಕೊಟ್ಟ ತಂದೆ ತಾಯಿಯ ನಂತರ ಮಹತ್ತರವಾದ ಸ್ಥಾನವನ್ನು ಶಿಕ್ಷಕರಿಗೆ ನೀಡಿ ಗೌರವಿಸಿದೆ.  ಶಿಲ್ಪಿ...